ಇನ್ನೆಷ್ಟು ದಿನ ಬದುಕಿರುತ್ತೇನೆಯೋ ಗೊತ್ತಿಲ್ಲ: ಪ್ರಚಾರದ ವೇಳೆ ಹೆಚ್.ಡಿ.ದೇವೇಗೌಡರು ಭಾವುಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಕಲೇಶಪುರ ತಾಲ್ಲೂಕಿನ ಸತ್ತಿಗರಹಳ್ಳಿಯಲ್ಲಿ ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಷಣದ ವೇಳೆ ಭಾವುಕರಾದರು.

ಮಾತನಾಡುವಾಗ ಅವರ ಕಣ್ಣುಗಳಲ್ಲಿ ನೀರು ತುಂಬಿತ್ತು. ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಯವರಿಗೆ ತಿಳಿಸುವ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ರೈತರಿಗೆ ನೀಡುತ್ತಿರುವ ಸಹಾಯಧನ ಮತ್ತು ಘೋಷಿಸಿದ ಸಹಾಯಧನವನ್ನು ದೇವೇಗೌಡರು ಉಲ್ಲೇಖಿಸಿದರು.

ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಗೆದ್ದು ವಿವಾದಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಹೀಗಾಗಿ ರಾಜ್ಯದ 28 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಗೆಲ್ಲಬೇಕು.

ಇನ್ನು ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ, ಆದರೆ ನಾನು ಬದುಕಿರುವವರೆಗೂ ರಾಜ್ಯದ ರೈತರಿಗೆ ಒಳ್ಳೆಯದನ್ನು ಮಾಡಿ ಅವರ ಬದುಕು ಹಸನಾಗಿಸಲು ಸಂಕಲ್ಪ ಮಾಡಿದ್ದೇನೆ ಎಂದರು. ಸುತ್ತಮುತ್ತಲಿನ 28 ಗ್ರಾಮಗಳ ಜನರು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!