ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ ಕ್ರಾಂತಿ ಆಗುತ್ತಾ ಗೊತ್ತಿಲ್ಲ, ಆದರೆ ಕಾಂಗ್ರೆಸ್ನಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಅದೇನೋ ಸೆಪ್ಟೆಂಬರ್ಗೆ ಕ್ರಾಂತಿ ಆಗುತ್ತೆ ಎನ್ನುತ್ತಿದ್ದಾರೆ. ಆದರೆ ಆ ಕ್ರಾಂತಿಯಾಗುತ್ತದೋ ಇಲ್ವೋ ಗೊತ್ತಿಲ್ಲ. ಕಾಂಗ್ರೆಸ್ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ.
ಒಂದಂತು ಸತ್ಯ ಕಾಂಗ್ರೆಸ್ನಲ್ಲಿ ಹಲವು ಗುಂಪುಗಳಿದ್ದು, ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ. ಈ ಸರ್ಕಾರದ ಮೇಲೆ ರಾಜ್ಯದ ಜನರು ವಿಶ್ವಾಸ ಕಳೆದುಕೊಂಡು ಬಹಳ ದಿನವಾಗಿದ್ದು, ಸರ್ಕಾರ ಸುಮನ್ನೇ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.