ʼದುಡ್ಡು ವೇಸ್ಟ್‌ ಮಾಡೋದಿಲ್ಲʼ ಹೆಂಡತಿಯನ್ನು ಕೊಂದು ಗುಂಡು ಹಾರಿಸಿಕೊಂಡ ಕ್ಯಾನ್ಸರ್‌ ಬಾಧಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ ಯಾವುದೇ ಭರವಸೆ ಇಲ್ಲದಿರುವುದರಿಂದ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು. ನಾನು ಮತ್ತು ನನ್ನ ಪತ್ನಿ ಒಟ್ಟಿಗೆ ಇರಲು ಪ್ರತಿಜ್ಞೆ ಮಾಡಿದ್ದು, ತನ್ನ ಪತ್ನಿ ಅಂಶು ತ್ಯಾಗಿಯನ್ನು ಕೂಡ ಕೊಂದು ನಾನು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಬರೆದಿದ್ದಾರೆ.

ಪೊಲೀಸರ ಪ್ರಕಾರ, ರಾಜ್ ನಗರ ಎಕ್ಸ್‌ಟೆನ್ಶನ್‌ನ ರಾಧಾ ಕುಂಜ್ ಸೊಸೈಟಿಯಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿಸಿ ಕುಲದೀಪ್ ಮೊದಲಿಗೆ ತನ್ನ ಪತ್ನಿಯನ್ನು ಕೊಂದಿದ್ದಾರೆ. ನಂತರ ತಾನು ಗುಂಡು ಹಾರಿಸಿಕೊಂಡಿದ್ದಾರೆ. ಘಟನೆ ನಡೆದ ಸಮಯದಲ್ಲಿ ಅವರ ಮಕ್ಕಳು ಮನೆಯಲ್ಲೇ ಇದ್ದರು. ಗುಂಡೇಟಿನ ಶಬ್ದ ಕೇಳಿ ತಮ್ಮ ಹೆತ್ತವರ ರೂಂ ಬಳಿ ಬಂದು ನೋಡಿದಾಗ, ಕುಲದೀಪ್ ಅವರ ಮೃತದೇಹ ನೆಲದ ಮೇಲೆ ಮತ್ತು ಅಂಶು ಅವರ ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿತ್ತು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!