ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ವರುಣಾ ಮತ್ತು ಕೋಲಾರ ಎರಡೂ ಕಡೆ ಟಿಕೆಟ್ ಕೊಡಿ ಎಂದು ಕೇಳಿದ್ದೇನೆ, ಸದ್ಯಕ್ಕೆ ವರುಣಾದಿಂದ ಟಿಕೆಟ್ ಸಿಕ್ಕಿದೆ. ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿದ್ದರಾಮಯ್ಯ ಹೇಳಿದ್ದಾರೆ.
ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಂದೇ ಹೆಸರು, ಗೊಂದಲ ಇಲ್ಲದ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದೆ ಎಂದಿದ್ದಾರೆ. ಟಿಕೆಟ್ ನೀಡಲು ಒಂದೇ ಸಮೀಕ್ಷೆ ಮಾನದಂಡ ಅಲ್ಲ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆಯಲಾಗಿದೆ. ವರದಿ ಆಧಾರಿತ ಟಿಕೆಟ್ ಹಂಚಿಕೆ ಇದಾಗಿದೆ ಎಂದಿದ್ದಾರೆ.