ಪಶ್ಚಿಮ ಬಂಗಾಳ ರಾಜ್ಯಪಾಲರ ಟ್ವಿಟರ್​​ ಖಾತೆಯನ್ನು ಬ್ಲಾಕ್ ಮಾಡಿದ್ದು ನಾನೇ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನಕರ್​​ ಅವರ ಟ್ವಿಟರ್​​ ಖಾತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬ್ಲಾಕ್ ಮಾಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಅನೇಕ ಪೋಸ್ಟ್​ ಮಾಡಿದ್ದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ದೀದಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲ ಧನಕರ್ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಹಲವಾರು ಪತ್ರಗಳನ್ನು ಬರೆದಿದ್ದೇನೆ.ರಾಜ್ಯಪಾಲರು ಯಾರ ಮಾತನ್ನೂ ಕೇಳುತ್ತಿಲ್ಲ, ಅವರು ಎಲ್ಲರಿಗೂ ಬೆದರಿಕೆ ಹಾಕುತ್ತಿದ್ದಾರೆ. ನಾನೇ ಖುದ್ದಾಗಿ ರಾಜ್ಯಪಾಲರ ಬಳಿಗೆ ಹೋಗಿ, ಮಾತನಾಡಿದ್ದೆ. ಆದರೂ ಪ್ರಯೋಜನವಾಗಲಿಲ್ಲ ಎಂದು ಪ್ರಧಾನಮಂತ್ರಿಗಳಿಗೆ ತಿಳಿಸಿದ್ದೆ ಎಂದರು.
ನನ್ನನ್ನು ಅಥವಾ ನನ್ನ ಅಧಿಕಾರಿಗಳನ್ನ ನಿಂದಿಸುತ್ತಾ ಅವರು ಟ್ವೀಟ್ ಮಾಡುತ್ತಿರುತ್ತಾರೆ. ಸರ್ಕಾರಕ್ಕೆ ಮಹತ್ವದ ಸಲಹೆ ನೀಡುವ ಬದಲು ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದಾರೆ.
‘ಫೋನ್ ಟ್ಯಾಪಿಂಗ್’ ಮಾಡಿದ್ದಾರೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!