ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರ್ಪಡೆ ಆಗಿದ್ದೇನೆ: ಪ್ರಮೋದ್​ ಮಧ್ವರಾಜ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌  

ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮೇಲೆ ವಿಶ್ವಾಸ ಇಟ್ಟು ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​ ಹೇಳಿದರು.
ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನನ್ನ ಬದುಕಿನಲ್ಲಿ ಹೊಸ ಪರ್ವ ಶುರುವಾಗಿದೆ. ದೇಶದಲ್ಲಿ ಇವತ್ತು ಒನ್ ನೇಷನ್, ಒನ್‌ ಲೀಡರ್, ಒನ್ ಪಾರ್ಟಿ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಇಡೀ ದೇಶವೇ ಮೆಚ್ಚಿದೆ.ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆಯಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಡಿ. ಕೆ. ಶಿವಕುಮಾರ್ ರಿಯಾಕ್ಷನ್
ಪ್ರಮೋದ್​ ಮಧ್ವರಾಜ್​ ಅವರು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಡಿ. ಕೆ. ಶಿವಕುಮಾರ್​, ಪ್ರಮೋದ್​ ಮಧ್ವರಾಜ್​ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!