ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಎಂದಿಗೂ ಬೂಟಾಟಿಕೆಯ ರಾಜಕಾರಣ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ನಡೆದ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸುವ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೃಹಸಚಿವ ಸ್ಥಾನದ ಜವಾಬ್ದಾರಿಯಿಂದ ಹಳ್ಳಿ, ಹಳ್ಳಿಗೂ ಬರಲು ಸಾಧ್ಯವಾಗಿಲ್ಲ. ಆದರೆ ಕ್ಷೇತ್ರದ ಜನರನ್ನು ಮರೆತಿಲ್ಲ, ನಾನು ಕ್ಷೇತ್ರಕ್ಕೆ ಬಂದಾಗ ನೀಡಿದ್ದ ಭರವಸೆ ಈಡೇರಿಸಿದ್ದೇನೆ ಎಂದು ತಿಳಿಸಿದ್ದಾರೆ.