ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಸೋಲಿನ ಬಗ್ಗೆ ಮಾತನಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ್ಯೋತಿಷಿಗಳಾಗಿದ್ದೀರಾ ಎಂದು ಮಾಜಿ ಮುಖ್ಯಮಂತ್ರಿಯೂ ಆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಗನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಈ ಮಹನೀಯರು ನನ್ನ ಪುತ್ರನ ವೈಫಲ್ಯಗಳಿಗೆ ಎಷ್ಟು ಕಾರಣರಾಗಿದ್ದಾರೆ ಎಂಬುದು ತಿಳಿದಿದೆ. ಜನರು ಎಲ್ಲದಕ್ಕೂ ಉತ್ತರ ಕೊಡುತ್ತಾರೆ ಎಂದರು.
ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಕನ್ನಡಿಗ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು ಎಂದರು.