ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದು ನಾನು : ಜನಾರ್ದನ ರೆಡ್ಡಿ

ದಿಗಂತ ವರದಿ ವಿಜಯಪುರ:

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದು ನಾನು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಳ್ಳಾರಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯತ್ ಹಿಡಿದು. ಬಿಜೆಪಿ ಪಕ್ಷ ಬಲವರ್ಧನೆಗೆ ಶ್ರಮಿಸಿರುವೆ. 9 ರಿಂದ10 ಎಂಎಲ್ ಎ ಗೆಲ್ಲಿಸಿರುವೆ. ಇಡೀ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೆ. ದಕ್ಷಿಣ ಭಾರತದ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು ಎಂದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ನಿಮ್ಮೆಲ್ಲರ ಆಶೀರ್ವಾದದಿಂದ ಮಾಡಿದ್ದು ಜನಾರ್ದನ ರೆಡ್ಡಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!