ಇಂದು ಮುಂಬೈನಲ್ಲಿ ‘I.N.D.I.A’ ನಾಯಕರ ಸಮಾಗಮ: ಒಗ್ಗಟ್ಟಿನ ಶಕ್ತಿ ಪ್ರದರ್ಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರದಿಂದ ಆರಂಭ ಮಾಡಿದ್ದ ಭಾರತ್ ಜೋಡೋ ನ್ಯಾಯ ಯಾತ್ರೆ ಇದೀಗ ಮುಕ್ತಾಯಗೊಂಡಿದ್ದು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಮಾರೋಪ ಸಮಾರಂಭವನ್ನು ಇಂದು ಆಯೋಜಿಸಲಾಗಿದೆ.

ಸಮಾರೋಪ ಸಮಾರಂಭದಲ್ಲಿ I.N.D.IA ಒಕ್ಕೂಟದ ನಾಯಕರು ಭಾಗವಹಿಸುತ್ತಾರೆ ಮತ್ತು ಏಕತೆಯ ಶಕ್ತಿಯನ್ನು ಪ್ರದರ್ಶಿಸಲಿದ್ದಾರೆ ಎನ್ನಲಾಗಿದೆ. ಇನ್ನು ಪ್ರಿಯಾಂಕಾ ಗಾಂಧಿ ಕೂಡ ಮುಂಬೈನಲ್ಲಿ ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ I.N.D.I.A ಮೈತ್ರಿ ಕೂಟದ ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್, ಮಹಾರಾಷ್ಟ್ರ ಮಾಜಿ ಸಿಎಂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಖಚಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!