ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಗೆ ಕಡಿವಾಣ ಹಾಕಲು I.N.D.I.A ಪ್ರಯತ್ನಿಸಲಿದೆ: ಸಿಎಂ ಯೋಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂಬ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹೇಳಿಕೆಗೆ ತೀವ್ರ ತರಾಟೆಗೆ ತೆಗೆದುಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ಮೋದಿ ಅವರು I.N.D.I.A ಬಣದ ಪಕ್ಷಗಳು ಸೆಡ್ಡು ಹೊಡೆಯಲು ಪ್ರಯತ್ನಿಸುತ್ತವೆ ಎಂದು ಹೇಳುತ್ತಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.

“I.N.D.I.A ಒಕ್ಕೂಟದ ಪಕ್ಷಗಳು ದಲಿತರು, ಎಸ್‌ಸಿಗಳು ಮತ್ತು ಒಬಿಸಿಗಳ ಮೀಸಲಾತಿಗೆ ಕಡಿವಾಣ ಹಾಕಲು ಪ್ರಯತ್ನಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಈ ಜನರು ರಂಗನಾಥ್ ಮಿಶ್ರಾ ಸಮಿತಿ ಮತ್ತು ಸಾಚಾರ್ ಅನ್ನು ರಚಿಸಿದರು. ರಂಗನಾಥ್ ಮಿಶ್ರಾ ಸಮಿತಿಯು ಶೇ 27ರಲ್ಲಿ ಶೇ 6ರಷ್ಟು ಮುಸ್ಲಿಮರಿಗೆ ನೀಡಬೇಕು ಎಂದು ಪ್ರಸ್ತಾಪಿಸಿತ್ತು, ಆಗ ಬಿಜೆಪಿ ಅದನ್ನು ವಿರೋಧಿಸಿತ್ತು ಎಂದು ಸಿಎಂ ಯೋಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!