ಚಂದ್ರಯಾನಕ್ಕೆ ತೆರಳಿದ ಯಾತ್ರಿಗಳಿಗೆ ನಾನು ಸಲಾಂ ಹೇಳುತ್ತೇನೆ: ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ ಕ್ರೀಡಾ ಸಚಿವ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿದೆ. ಭಾರತದ ಸಾಧನೆಗೆ ದೇಶ ವಿದೇಶಗಳಿಂದ ಅಭಿನಂದನೆಗಳು ಹರಿದು ಬರುತ್ತಿದೆ.

ಇದರ ನಡುವೆ ರಾಜಸ್ಥಾನ ಕ್ರೀಡಾಸಚಿವ ಅಶೋಕ್ ಚಾಂದ್ನಾ ಹೇಳಿಕೆ ವೈರಲ್ ಆಗಿದೆ. ಚಂದ್ರಲೋಕದಲ್ಲಿ ಯಶಸ್ವಿಯಾಗಿ ಇಳಿದ ಯಾತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದೆ.

ರಾಜಸ್ಥಾನ ಕ್ರೀಡಾ ಸಚಿವ ಅಶೋಕ್ ಚಾಂದ್ನಾ, ಸಂತಸ ಹಂಚಿಕೊಂಡಿದ್ದಾರೆ. ಈ ಕಠಿಣ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಚಂದ್ರನ ಮೇಲೆ ನಾವು ಯಶಸ್ವಿಯಾಗಿ ಲ್ಯಾಂಡ್ ಆಗಿದ್ದೇವೆ. ಇದೇ ವೇಳೆ ಚಂದ್ರಯಾನಕ್ಕೆ ತೆರಳಿದ ಯಾತ್ರಿಗಳಿಗೆ ನಾನು ಸಲಾಂ ಹೇಳುತ್ತೇನೆ. ನಾವು ವಿಜ್ಞಾನ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಹೆಜ್ಜೆ ಇಟ್ಟಿದ್ದೇವೆ. ಸಮಸ್ತ ಭಾರತೀಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಕ್ರೀಡಾ ಸಚಿವರು ತಮ್ಮ ಉನ್ನತ ನಾಯಕರ ದಾರಿಯಲ್ಲಿ ಸಾಗುತ್ತಿದ್ದಾರೆ. ಅವರನ್ನೇ ಆದರ್ಶವಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಇಂತಹ ಮಾತುಗಳು ಬಂದರೆ ಅಚ್ಚರಿ ಪಡಬೇಕಾಗಿಲ್ಲ ಎಂದು ಕಮೆಂಟ್ ಮಾಡಿದ್ದಾರೆ.

ಈ ಸಚಿವರು ಇಂಡಿಯಾದವರಲ್ಲ, ಇವರು ಐಎನ್‌ಡಿಐಎ(I-N-D-I-A) ನಾಯಕರು ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!