Monday, September 22, 2025

ಮೂರು- ನಾಲ್ಕು ಬಾರಿ ಸತ್ತೆ ಹೋಗಬೇಕಿತ್ತು: ರಿಷಬ್ ಶೆಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕಾಂತಾರ ಚಾಪ್ಟರ್‌ 1ʼ ಚಿತ್ರದ ಬಹುನಿರೀಕ್ಷಿತ ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿದೆ. ವಿವಿಧ ಭಾಷೆಗಳಲ್ಲಿ ಟ್ರೈಲರ್‌ ಮೂಡಿ ಬಂದಿದ್ದು, ದಾಖಲೆಯ ವೀಕ್ಷಣೆ ಕಂಡಿದೆ.

ಬಳಿಕ ರಿಷಬ್ ಶೆಟ್ಟಿ ಇಂದು ಸುದ್ದಿಗೋಷ್ಠಿ ನಡೆಸಿದ್ದು. ಕಾಂತಾರ ಟೀಮ್ ಹಾಗೂ ಜೂನಿಯರ್ ಎನ್‌ಟಿಆರ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದಾರೆ.

ಸಿನಿಮಾದ ಎಲ್ಲ ಹಾಡುಗಳನ್ನು ರಿಲೀಸ್ ಮಾಡುತ್ತೇವೆ. ಸ್ವಲ್ಪ ತಡ ಆಗುತ್ತದೆ. ಪ್ಯಾನ್ ಇಂಡಿಯಾ ಮೂವಿ ಆಗಿದ್ದರಿಂದ ಕೆಲಸ ತುಂಬಾ ಇದೆ. ಮೂಸಿಕ್ ಡೈರೆಕ್ಟರ್ ಕೆಲಸ ಇನ್ನು ಇದೆ. ಹೀಗಾಗಿ ಇಲ್ಲಿಗೆ ಅವರು ಬಂದಿಲ್ಲ. ಈಗಾಗಲೇ ನನ್ನ ಸಿನಿಮಾ ರಿಲೀಸ್ ಆಗಿ ಮೂರು ವರ್ಷಗಳು ಆಗಿವೆ. ಊರಲ್ಲಿ ಇದ್ದು ಸಿನಿಮಾ ಮಾಡಿ ಮುಗಿಸಿದ್ದೇವೆ. ಇದೀಗ ಫಸ್ಟ್ ಟೈಮ್ ಬೆಂಗಳೂರಿಗೆ ಈ ಕಾಂತಾರ ಬಂದಿದೆ ಎಂದು ಹೇಳಿದ್ದಾರೆ.

ಮೂರು- ನಾಲ್ಕು ಬಾರಿ ನಾನು ಸತ್ತೆ ಹೋಗಬೇಕಿತ್ತು. ಆ ಮಟ್ಟಿಗೆ ತೊಂದರೆ ಆಗಿದೆ. ಮೂರು ತಿಂಗಳಿಂದ ನಾವು ಸರಿಯಾಗಿ ನಿದ್ದೆನೇ ಮಾಡಿಲ್ಲ. ಎಲ್ಲರೂ ನಮ್ಮ ಸಿನಿಮಾ ಅಂತಾ ಕೆಲಸ ಮಾಡಿದರು. ಈ ವೇಳೆ ಸಾಕಷ್ಟು ತೊಂದರೆಗಳನ್ನು ಎದುರಿಸಿದ್ದೇವೆ. ಈ ಸಿನಿಮಾನ ಈ ಹಂತಕ್ಕೆ ತಂದಿದ್ದೇ ಕನ್ನಡಿಗರು. ಕನ್ನಡಿಗರಿಂದ ಈ ಮೂವಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಬಹುತೇಕ ಕನ್ನಡ ಕಲಾವಿದರೇ ಸಿನಿಮಾದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.

ಕಾಂತಾರ ಸಿನಿಮಾದಲ್ಲಿ ಮುಳುಗೋಗಿದ್ದರಿಂದ ಹೊರಗಡೆ ಏನು ಆಗುತ್ತಿದೆ ಎನ್ನುವುದು ನನ್ನ ಗಮನಕ್ಕೆ ಇಲ್ಲ. ಸಿನಿಮಾದ ಕಥೆ ಚೆನ್ನಾಗಿದ್ದರೇ ಇಂಡಸ್ಟ್ರಿ ಚೆನ್ನಾಗಿರುತ್ತದೆ. ಅಭಿಮಾನಿಗಳಲ್ಲಿ ಸಿನಿಮಾದ ಅಭಿರುಚಿಗಳು ಬದಲಾವಣೆ ಆದಾಗ ಸಿನಿಮಾದವರು ಅವುಗಳನ್ನು ನೀಗಿಸಬೇಕು. ಆಗ ಸಕ್ಸಸ್ ಸಿಗುತ್ತದೆ ಎಂದು ಹೇಳಿದ್ದಾರೆ.

ಸಾಕಷ್ಟು ಕಷ್ಟಗಳನ್ನು ದಾಟಿ ಸಿನಿಮಾ ಮುಗಿಸಿದ್ದೇವೆ. ಇದರ ಮಧ್ಯೆ ಪ್ರಗತಿ ಅವರು ಸಿಕ್ಕ ಸಿಕ್ಕ ದೇವರಿಗೆ ಹರಕೆ ಹೊತ್ತಿದ್ದರು. ಎಲ್ಲರೂ ಹೇಳುತ್ತಿದ್ದರು. ನನ್ನಿಂದ ಅಂತಾ. ಅದು ನನ್ನಿಂದ ಆಗಿದ್ದಲ್ಲ,‌ ನನ್ನ ಹೆಂಡತಿ, ನನ್ನ ರೈಟರ್ ಟೀಂ ಮನೆ ಬಿಟ್ಟು ನನ್ನ ಜೊತೆಗೆ ಶ್ರಮ, ಶ್ರದ್ಧೆ ಹಾಕಿದ್ದರಿಂದ ದೊಡ್ಡ ಪ್ರಾಜೆಕ್ಟ್​ ಮಾಡಿ ಮುಗಿಸುವಲ್ಲಿ ಯಶಸ್ವಿಯಾದೇವು ಎಂದು ರಿಷಭ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ