ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರ ಕೈ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದರು.
ಈ ವೇಳೆ ಮಧು ಬಂಗಾರಪ್ಪ ಅವರು ರಾಹುಲ್ ಗಾಂಧಿಗೆ ಶಿವರಾಜ್ ಕುಮಾರ್ ರನ್ನು ಪರಿಚಯಿಸಿದಾಗ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು.
ನಂತರ ಮಾತನಾಡಿದ ಶಿವರಾಜ್ ಕುಮಾರ್, ರಾಹುಲ್ ಗಾಂಧಿ ಅಭಿಮಾನಿಯಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಇತ್ತೀಚೆಗೆ ಅವರು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ನನ್ನನ್ನು ಬಹಳ ಹಿಡಿಸಿತ್ತು.ನಾನು ಕೂಡ ವರ್ಕೌಟ್, ಫಿಟ್ನೆಸ್ ಗೆ ಪ್ರಾಮುಖ್ಯತೆ ನೀಡುತ್ತೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮೈಲುಗಳನ್ನು ರಾಹುಲ್ ಗಾಂಧಿ ನಡೆದು ಕ್ರಮಿಸಿದ್ದಾರೆ. ಅವರ ಯಾತ್ರೆ ನನಗೆ ಬಹಳ ಪ್ರೇರೇಪಿಸಿತು ಎಂದಿದ್ದಾರೆ.