ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡಿದರೆ ಅದನ್ನು ಸ್ವಾಗತಿಸುತ್ತೇನೆ, ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದಿರುವ ಸುಳಿವು ಬಿಟ್ಟುಕೊಟ್ಟ ನಳಿನ್ ಅವರು ಭಾವುಕರಾಗಿ ಮಾತನಾಡಿದ್ದಾರೆ.
ರಾಜಕಾರಣದಲ್ಲಿ ಅಧಿಕಾರ ಅನ್ನೋದೊಂದೇ ಮುಖ್ಯ ಅಲ್ಲ, ಸಮಯಕ್ಕೆ ತಕ್ಕಂತೆ ಹೊಂದಿಕೊಳ್ಳೋದು ಮುಖ್ಯವೇ. ವರಿಷ್ಠರು ಏನೇ ತೀರ್ಮಾನ ಮಾಡಲಿ ಒಪ್ಪುತ್ತೇನೆ, ಅವರು ಕೊಟ್ಟ ಜವಾಬ್ದಾರಿ ನಿಭಾಯಿಸ್ತೇನೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷ ಎಲ್ಲಕ್ಕಿಂತ ವಿಭಿನ್ನ, ಇಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಗುರುತಿಸಲಾಗುತ್ತದೆ. ಬೆಳೆಸಲಾಗುತ್ತದೆ. ವರಿಷ್ಠರು ಏನಾದರೂ ಹೊಸಬರಿಗೆ ಅವಕಾಸ ಕೊಡೋಣ ಎಂದರೆ ತುಂಬು ಹೃದಯದಿಂದ ಗೌರವಿಸುತ್ತೇನೆ. ವ್ಯಕ್ತಿಗಿಂತ ಪಕ್ಷ ದೊಡ್ಡದು. ನಮ್ಮಲ್ಲಿ ಒಡಕಿಲ್ಲ ಒಟ್ಟಾರೆ ಬಿಜೆಪಿ ಗೆದ್ದು, ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.