ಹೊಸದಿಗಂತ ವರದಿ, ಹುಬ್ಬಳ್ಳಿ:
ಹಳೇ ಹುಬ್ಬಳ್ಳಿ ಗಲಭೆಗೆ ಪ್ರಕರಣ ಹಿಂಪಡೆದಿಂದ ಸರ್ಕಾರ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು, ಸರಿಯಾಗಿದೆ. ಹೈಕೋರ್ಟ್ ಆದೇಶವನ್ನು ಸ್ವಾಗತಿಸುವುದಾಗಿ ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಗೆ ನೀಡಿದ ಅವರು, ಹಳೇ ಹುಬ್ಬಳ್ಳಿಯ ನಡೆದ ಗಲಭೆಯಲ್ಲಿ ಅಮಾಯಕರ ಮನೆಯ ಮೇಲೆ ಕಲ್ಲು ತೂರಾಟ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿತ್ತು. ಆಗಿನ ಬಿಜೆಪಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ೧೫೦ ಕ್ಕೂ ಹೆಚ್ಚು ಗಲಭೆ ಕೊರರನ್ನು ಜೈಲಿಗೆ ಕಳುಹಿಸಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮರ್ ಓಲೈಕೆಗಾಗಿ ಇದು ಸೂಕ್ಷ್ಮ ಪ್ರಕರಣ ಎಂದು ಹಿಂಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿಕೊಂಡಿತ್ತು. ಕಳೆದ ಎರಡು ವಿಧಾನಸಭಾ ಅಧಿವೇಶನದಲ್ಲಿ ಪ್ರಕರಣ ಸತ್ಯಾಂಶ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೆ. ಆದರೂ ಸರ್ಕಾರ ತನ್ನ ನಡೆ ಬದಲಿಸಿರಲಿಲ್ಲ. ಈಗ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿ ಯಶಸ್ವಿಯಾದ ವಕೀಲ ವೆಂಕಟೇಶ ದಳವಾಯಿ ಹಾಗೂ ಗಿರೀಶ ಭಾರದ್ವಾಡ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರ ಮುಸ್ಲಿಮರ್ ತುಷ್ಟೀಕರಣ ಮಾಡುವ ಮೂಲಕ ಓಟ್ ಬ್ಯಾಂಕ್ ಗಾಗಿ ಈ ಪ್ರಕರಣ ಹಿಂಪಡೆದಿತ್ತು. ಹೈಕೋರ್ಟ್ ಆದೇಶ ಸರಿಯಾಗಿದೆ. ಇದು ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ತೀರ್ಪು ತೀವ್ರ ಹಿನ್ನಡೆಯಾಗಿದೆ.