Sunday, December 10, 2023

Latest Posts

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿಎಂ ಸಿದ್ದು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಯೂ ಟರ್ನ್​ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಹೈಕಮಾಂಡ್​ ಪಕ್ಷ. ಹಾಗಾಗಿ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​ ಭಾಗಿಯಾಗಿದ್ದು, ಜಾತಿಗಣತಿ ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಜಾತಿಗಣತಿ ವರದಿ ಸಲ್ಲಿಸಿದರೆ ಪರಿಶೀಲಿಸಿ ನಿರ್ಧರಿಸುತ್ತೇವೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತಾ ಸಿದ್ದರಾಮಯ್ಯ ಹೇಳಿರುವ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ. ಯಾವ ಶೇರಿಂಗ್, ಹಂಚಿಕೊಳ್ಳುವುದಕ್ಕೆ ಯಾವ ಆಸ್ತಿನೂ ಇಲ್ಲ, ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದವರಿಗೆ ನೋಟಿಸ್ ಕೊಡುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್​ ಮಾತನಾಡಿದ್ದು, ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಇದ್ದಾಗ ಚರ್ಚಿಸಿದರೆ ಅರ್ಥ ಇರುತ್ತೆ. ಮುಂದಿನ ಸಿಎಂ ಬಗ್ಗೆ ಕೆಲವರ ಅಭಿಪ್ರಾಯ ಇರುತ್ತೆ. ಆಡಳಿತ ನಡೆಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ಗೆ ಗುರಿ ಇದೆ. ಸರ್ಕಾರ ಸುಭದ್ರವಾಗಿರಬೇಕು ಎನ್ನುವುದು ಇಬ್ಬರ ಗುರಿ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!