ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಸ್ಪರ್ಧೆ ಕುರಿತ ಗೊಂದಲಗಳಿಗೆ ಇದೀಗ ಮಾಜಿ ಸಿಎಂ ಮಾತನಾಡಿದ್ದು, ನಾನು ಎಲ್ಲಿ ಹೈಕಮಾಂಡ್ ಸೂಚಿಸಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ನನ್ನ ಸ್ಪರ್ಧೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ಸೂಚಿಸಿದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಈ ತಿಂಗಳ 22 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸದಂತೆ ಇಲ್ಲದೇ ವರುಣಾಗೆ ಹೋಗುವಂತೆ ರಾಹುಲ್ ಗಾಂಧಿ ಯಾವುದೇ ಸಲಹೆ ನೀಡಿಲ್ಲ ಎಂದಿದ್ದಾರೆ. ಎಲ್ಲಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಸೂಚನೆ ಕೊಟ್ಟಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದೇನೆ, ಹೈಕಮಾಂಡ್ 2 ಕ್ಷೇತ್ರಗಳ್ಲಿ ನಿಲ್ಲಿ ಅಂದ್ರು ನಿಲ್ಲುತ್ತೇನೆ ಎಂದರು.
ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯ ಬಳಿಕ ಪ್ರತ್ಯೇಕ ಮಾತುಕತೆ ನಡೆಸಿರುವ ರಾಹುಲ್ ಗಾಂಧಿ-ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಮತ್ತು ಇತರೆ ಕ್ಷೇತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿತ್ತು, ಇದನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.