ನಾನು ಮತ್ತೆ ಬಿಜೆಪಿಗೆ ಹೋಗುವುದು ಹಸಿ ಸುಳ್ಳು: ಮಾಜಿ ಸಚಿವ ಜಗದೀಶ ಶೆಟ್ಟರ್

ಹೊಸದಿಗಂತ ವರದಿ, ವಿಜಯಪುರ:

ನಾನು ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂಬ ಸುದ್ದಿಯನ್ನು ಹಬ್ಬಿಸಿದ್ದಾರೆ. ಇದು ಹಸಿ ಸುಳ್ಳು ಎಂದು ಮಾಜಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಾಕಷ್ಟು ಜನ ಬಿಜೆಪಿಯಿಂದ ಕಾಂಗ್ರೆಸ್ ‌ಪಕ್ಷಕ್ಕೆ ಸೇರಿಕೊಳ್ಳುತ್ತಿದ್ದಾರೆ. ಜೊತೆಗೆ ನನ್ನ ಮೂಲಕ ಕೂಡ ಸಂಪರ್ಕ ಮಾಡಿ ಸೇರಲು ಮುಂದೆ ಬರುತ್ತಿದ್ದಾರೆ ಎಂದರು.

ಇಂತಹ ಸಂದರ್ಭಗಳಲ್ಲಿ ಈ ಸುಳ್ಳು ಸುದ್ದಿ ಹಬ್ಬಿಸಿ, ಜಗದೀಶ ಶೆಟ್ಟರ್ ಅವರೇ ಮರಳಿ ಬರುತ್ತಾರೆ ಅಂತಾ ಹಬ್ಬಿಸಿದ್ದಾರೆ. ಅಲ್ಲಿರುವ ಜನರನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆದಿದೆ ಅಷ್ಟೇ ಎಂದರು.

ನನಗಂತೂ ಬಿಜೆಪಿಯಿಂದ ಯಾರೂ ಆಹ್ವಾನ ಕೊಟ್ಟಿಲ್ಲ, ಆಹ್ವಾನ ಕೊಡುವ ಪ್ರಶ್ನೆಯೇ ಬರುವದಿಲ್ಲ. ಅಸೆಂಬ್ಲಿ ಚುನಾವಣೆಯಲ್ಲಿ ನನಗೆ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ತಪ್ಪಿಸಿದ್ದ ಪರಿಣಾಮ ಅಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕದ ಜನತೆ ತಿಳಿಸಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮತ್ತೆ ಹಿನ್ನಡೆಯಾಗಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಜನಸಂಘದಿಂದ ಬಂದಂತವರಿಗೆ ಒಂದು ಟಿಕೆಟ್ ಕೊಡಲಿಲ್ಲ ಬಿಜೆಪಿಯವರು. ಇದನ್ನು ಈಶ್ವರಪ್ಪನವರಿಗೆ ಪ್ರಶ್ನೆ ಮಾಡಿ ? ಎಂದರು.

ಬಿಜೆಪಿಯವರು ಯಾವ ರೀತಿ ಜನಸಂಘದವರನ್ನು ಕಡೆಗಣಿಸಿದ್ದಾರೆ ನಿವೇ ನೋಡಿ. ಹಿಂದುತ್ವಕ್ಕೆ ರಾಜಕಾರಣ ಯಾಕೆ ಬೆರೆಸುತ್ತಿದ್ದಾರೆ ಗೊತ್ತಿಲ್ಲ. ನಾನು ಜನ ಸಂಘದಿಂದ ಬಂದವರಿಗೆ ಕಾಂಗ್ರೆಸ್ ಹೋಗುವಂತೆ ಮಾಡಿದ್ದು ಯಾರು ಎಂದರು.

ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ನನಗೆ ಯಾವ ರೀತಿ ನಡೆಸಿಕೊಂಡು ಹೊರಗೆ ಹಾಕುವಂತಹ ಪ್ರಯತ್ನ ಮಾಡಿದ್ದರಲ್ಲ ಇದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ಪಂಚಾರಾಜ್ಯ ಚುನಾವಣೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಎಕ್ಸಿಟ್ ಪೋಲ್ ನಲ್ಲಿ ಬಲಯುತವಾಗಿದೆ. ಮೂರನೇ ತಾರಿಖಿನ ಫಲಿತಾಂಶದಲ್ಲಿ ಹೆಚ್ಚು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!