ನನ್ನ ಅವಧಿ ಮುಗಿಯುವ ಮುನ್ನ ಮುಸ್ಲಿಮರ ಅಭಿವೃದ್ಧಿ ಹಣವನ್ನು 10 ಸಾವಿರ ಕೋಟಿಗೆ ಏರಿಸುವೆ: ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ಅಧಿಕಾರದ ಅವಧಿ ಮುಗಿಯುವ ಮುನ್ನ ಮುಸ್ಲಿಮರ ಅಭಿವೃದ್ಧಿ ಹಣವನ್ನು 10 ಸಾವಿರ ಕೋಟಿಗೆ ಏರಿಸಲಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬ್ಯಾರಿ ವೆಲ್‌ಫೇರ್‌ ಅಸೋಸಿಯೇಷನ್‌ ವತಿಯಿಂದ ನಿರ್ಮಾಣವಾದ ಬ್ಯಾರಿ ಸೌಹಾರ್ದ ಭವನ ಉದ್ಘಾಟಿಸಿ ಮಾತನಾಡುವ ವೇಳೆ ಮುಸ್ಲಿಂ ಸಮುದಾಯದ ಅಭಿವೃದ್ಧಿ ಹಣಕ್ಕಾಗಿ ಬೇಡಿಕೆ ಬರುತ್ತಿರುವ ವಿಚಾರದ ಬಗ್ಗೆ ಮಾತನಾಡಿದರು.

ಮೊದಲು ಮುಸ್ಲಿಂ ಅಭಿವೃದ್ಧಿಗೆ 400 ಕೋಟಿ ಹಣ ಮೀಸಲಿಡಲಾಗಿತ್ತು. ಆ ಬಳಿಕ ಇದನ್ನು ನಾನು 3 ಸಾವಿರ ಕೋಟಿಗೆ ಏರಿಸಿದ್ದೇನೆ. ಅಂದು ಕೂಡ ನನ್ನ ಎದುರು ಯಾರೂ ಬಂದು ಇದರ ಬಗ್ಗೆ ಕೇಳಿರಲಿಲ್ಲ. ಹಾಗಿದ್ದರೂ ನಾನು ಅನುದಾನ ಹೆಚ್ಚು ಮಾಡಿದ್ದೆ. ಈಗಲೂ ಕೂಡ ಅಷ್ಟೇ ಅನುದಾನ ಹೆಚ್ಚು ಮಾಡೇ ಮಾಡ್ತೀನಿ. ಮುಂದೆ ನನ್ನ ಅವಧಿ ಮುಗಿಯುವಷ್ಟರಲ್ಲಿ 10 ಸಾವಿರಕ್ಕೆ ಏರಿಕೆ ಮಾಡುತ್ತೇನೆ ಅದು ನನ್ನ ಕೆಲಸ. ರಾಜ್ಯದಲ್ಲಿ ನಾವು ಎಲ್ಲಾ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ. ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!