ರಾಜ್ಯ ರಾಜಕಾರಣಕ್ಕೆ ನಾನು ಮತ್ತೆ ಬರುವುದಿಲ್ಲ: ಜೆ.ಪಿ. ನಡ್ಡಾ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯನ್ನು ಬಿಜೆಪಿ ಶೀಘ್ರದಲ್ಲೇ ಆಯ್ಕೆ ಮಾಡುವ ಸಾಧ್ಯತೆ ಇದ್ದು, ಈ ನಡುವೆ ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆಯನ್ನು ನಡ್ಡಾ ತಳ್ಳಿ ಹಾಕಿದ್ದಾರೆ.

ನಾನು ಜವಾಬ್ದಾರಿಯುತ ಹುದ್ದೆಯಲ್ಲಿದ್ದೇನೆ. ಹಾಗಾಗಿ ಹಿಮಾಚಲ ಪ್ರದೇಶದ ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಹಿಮಾಚಲ ಪ್ರದೇಶದ ಸರ್ಕಾರವನ್ನು ಟೀಕಿಸಿರುವ ನಡ್ಡಾ, ಕಾಂಗ್ರೆಸ್ ಸರ್ಕಾರಗಳ ಪೈಕಿ ಹಿಮಾಚಲ ಪ್ರದೇಶ ಅತ್ಯಂತ ಭ್ರಷ್ಟವಾಗಿದೆ. ಕೇಂದ್ರದಿಂದ ಅನುದಾನ ಸಿಕ್ಕಿಲ್ಲ ಎಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. ನಿಮಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರದಿಂದ ಕೆಳಗಿಳಿಯಿರಿ. ನಿಮ್ಮ ತಪ್ಪಿಗಾಗಿ ಬೇರೆಯವರನ್ನು ದೂಷಿಸದಿರಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!