ಪಕ್ಷ ಹೇಳಿದರೆ ಚುನಾವಣೆಗೆ ನಿಲ್ಲುತ್ತೇನೆ, ಪಕ್ಷದ ತೀರ್ಮಾನವೇ ಅಂತಿಮ: ಜಗದೀಶ್‌ ಶೆಟ್ಟರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷ ಸೇರಿದ ನಂತರ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಹೇಳಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಿಂದ ಕರೆ ಬರುತ್ತಿದೆ. ಆದರೆ, ಹುಬ್ಬಳ್ಳಿ-ಧಾರವಾಡಕ್ಕೆ ಸಾಕಷ್ಟು ಜನ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿದ್ದರೂ ಹೋಗಿರಲಿಲ್ಲ.

ಈ ಅವಕಾಶ ಮೂರು ಬಾರಿ ಸಿಕ್ಕಿತ್ತು. ನನಗೆ ಆಸಕ್ತಿ ಇರಲಿಲ್ಲ. ಆದರೆ ಈಗ ಜನರ ಒತ್ತಡ ಹೆಚ್ಚಿದೆ. ಪಕ್ಷದ ಮುಖಂಡರು ಹೇಳಿದರೆ ಹೋರಾಟಕ್ಕೆ ಸಿದ್ಧ ಎಂದು ಶೆಟ್ಟರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!