ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯದಿಂದ ನಾನು ದೂರ ಉಳಿಯುವುದಾಗಿ ಜೆಡಿಎಸ್ ಪಕ್ಷದ ಯುವ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ (Nikhil Kumar) ಹೇಳಿದ್ದಾರೆ.
ಬೀದರ್ ನಲ್ಲಿ ಮಾತನಾಡಿರುವ ನಿಖಿಲ್, ‘ರಾಜಕೀಯದಿಂದ (Politics) ದೂರುವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ’ ಎಂದಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು ಇದೇ ಮಾತುಗಳನ್ನು ಆಡಿದ್ದರು. ಸಿನಿಮಾದಲ್ಲಿ (Cinema) ಸಾಕಷ್ಟು ಅವಕಾಶಗಳು ಇರುವುದರಿಂದ ಅಲ್ಲಿಯೇ ನೆಲೆಯೂರುವಂತೆ ಹೇಳಿದ್ದೇನೆ. ರಾಜಕಾರಣಕ್ಕೆ ನಿಖಿಲ್ ಬರುವುದು ಬೇಡ ಎಂದು ಕುಮಾರಸ್ವಾಮಿಗಳು ಹೇಳಿಕೆ ನೀಡಿದ್ದರು. ತಂದೆಯ ಮಾತನ್ನು ಪುತ್ರ ನಿಖಿಲ್ ಮತ್ತೆ ನೆನಪಿಸಿದ್ದಾರೆ.