ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಪಕ್ಷವು ಎನ್ಡಿಎ ಮೈತ್ರಿಕೂಟ ಸೇರುವುದು ಪಕ್ಕವಾಗಿದ್ದು, ಹೀಗಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಆಗಿದ್ದರು. ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ, ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು ಅಷ್ಟೇ. ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದಿದ್ದಾರೆ. ಸದ್ಯದಲ್ಲೇ ಕುಮಾರಸ್ವಾಮಿ ಅವರ ಮನೆಗೆ ಹೋಗಿ ಮಾತನಾಡಿಸಿಕೊಂಡು ಬರುತ್ತೇನೆ. ಹೇಗೂ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ಹಾಗಾಗಿ ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದರು.