ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೋಪಾಲ್ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿರುವ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ, ಶೀಘ್ರದಲ್ಲಿಯೇ ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಭೋಪಾಲ್ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿರುವ ಅವರು, ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಆಲ್ಕೋಹಾಲ್ (Alcohol) ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಮದ್ಯದಂಗಡಿಗಳಲ್ಲಿ ಗೋ ಶಾಲೆ (Cow Sheltar) ಆರಂಭಿಸುವುದಾಗಿ ಘೋಷಿಸಿದರು ಜೊತೆಗೆ ರಾಜ್ಯ ಸರ್ಕಾರ ಮದ್ಯನೀತಿಯ ಕುರಿತು ಘೋಷಣೆ ಮಾಡಲು ತಡಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಓರ್ಚಾದಲ್ಲಿರುವ ಮದ್ಯದಂಗಡಿ ಹೊರಗೆ 11 ಹಸುಗಳನ್ನು ಕಟ್ಟಿಹಾಕಲು ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ನನ್ನನ್ನು ತಡೆಯುವ ಧೈರ್ಯ ಯಾರಿಗಿದೆ ಎಂದು ನೋಡೋಣ ಎಂದು ಸವಾಲೆಸೆದರು.
ಭಗವಾನ್ ಶ್ರೀರಾಮಚಂದ್ರನ ಹೆಸರಿನಲ್ಲಿ ಸರ್ಕಾರಗಳು ರಚನೆಯಾಗುತ್ತಿವೆ. ಆದರೆ ಓರ್ಚಾದಲ್ಲಿರುವ ರಾಮರಾಜ ದೇವಸ್ಥಾನದ ಬಳಿ ಮದ್ಯದಂಗಡಿ (Liquor Shop) ಯನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿರುವುದು ಬೇಸರದ ಸಂಗತಿ. ಮಧ್ಯಪ್ರದೇಶವು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದಲ್ಲಿ ಮುಂಚೂಣಿಯಲ್ಲಿದೆ. ಈ ಹಿಂಸೆಯ ಪ್ರವೃತ್ತಿಗೆ ಮದ್ಯ ಸೇವನೆಯು ಒಂದು ಕಾರಣ ಎಮದು ಅವರು ತಿಳಿಸಿದರು.