ಮನೆ ಹಂಚಿಕೆ ಮಾಡಲು ಹಣ ಪಡೆದಿರುವುದು ಸಾಬೀತು ಮಾಡಿದರೆ ನಾನೇ ಸ್ವಯಂ ಪ್ರೇರಿತ ರಾಜೀನಾಮೆ ನೀಡುವೆ: ಸಚಿವ ಜಮೀರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ ಬಿ. ಆರ್. ಪಾಟೀಲ್ ಅವರು ಮಾಡಿರುವ ಆರೋಪ ಸಂಬಂಧ ತನಿಖೆಗೆ ಆದೇಶಿಸಲಾಗುವುದು. ತನಿಖೆ ನಂತರ ಯಾರಾದರೂ ತಪ್ಪು ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳ ಲಾಗುವುದು. ಬಿ. ಆರ್. ಪಾಟೀಲರ ಜತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು.

ಬಿ. ಆರ್. ಪಾಟೀಲ್ ಅವರು ಸಹ ಸಚಿವರು ಹಣ ಪಡೆದಿದ್ದಾರೆ ಎಂದು ಹೇಳಿಲ್ಲ. ಅಧಿಕಾರಿಗಳ ಹೆಸರು ಸಹ ಹೇಳಿಲ್ಲ. ಪಂಚಾಯಿತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಯವರಿಗೂ ಈ ವಿಚಾರದ ಬಗ್ಗೆ ಎಲ್ಲ ಮಾಹಿತಿ ತಿಳಿಸಿದ್ದೇನೆ. ನಾನು ಪ್ರವಾಸದಲ್ಲಿ ಇದ್ದ ಕಾರಣ ಮಾತನಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!