ದಿಗಂತ ವರದಿ ನವಲಗುಂದ:
ಧಾರವಾಡ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮತದಾನ ಮಾಡಿದರು.
ಈ ವೇಳೆ ಸುದ್ದಿರಾರರೊಂದಿಗೆ ಮಾತನಾಡಿ, ಧಾರವಾಡ ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ಕೈಹಿಡಿಯಲಿವೆ. ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದರು.