ಶ್ರೀನಗರ ಏರ್‌ಪೋರ್ಟ್‌ ನಿಯಂತ್ರಣಕ್ಕೆ ಪಡೆದ ಐಎಎಫ್: ಜಮ್ಮು-ಕಾಶ್ಮೀರದ ಶಾಲಾ-ಕಾಲೇಜುಗಳಿಗೆ ರಜೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಪರೇಷನ್‌ ಸಿಂಧೂರʼ ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನ ನಿಯಂತ್ರಣಕ್ಕೆ ಪಡೆದಿದೆ.

ಜೊತೆಗೆ ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿ ವರೆಗೆ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ , ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.

ಸದ್ಯ ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದ್ದು, ವಿಮಾನಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ ವಾಯು ಸುರಕ್ಷತಾ ಕಾರ್ಯವಿಧಾನಗಳನ್ನ ಸಹ ನಿಯಂತ್ರಿಸುತ್ತದೆ ಎಂದು ವರದಿಗಳಿಂದ ತಿಳಿದುಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!