ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಅಂತಿಮ ದರುಶನಕ್ಕೆ ವ್ಯವಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಎಎಸ್ ಅಧಿಕಾರಿ ಕೆ.ಶಿವರಾಮ್   (K.Shivaram) ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುರುವಾರ ಶಿವರಾಮ್ ನಿಧನರಾಗಿದ್ದು, ಶುಕ್ರವಾರ (ಮಾ.1) ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಭಿಮಾನಿಗಳಿಗೆ, ಆಪ್ತರಿಗೆ ಅಂತಿಮ ದರುಶನಕ್ಕೆ ಅವಕಾಶವಿದೆ ಎಂದು ಅಳಿಯ ಪ್ರದೀಪ್‌ (Actor Pradeep) ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ , ಕನ್ನಡದಲ್ಲಿ ಐಎಎಸ್ ಪಾಸು ಮಾಡಿ ಉತ್ತಮ ಅಧಿಕಾರಿ ಎನಿಸಿಕೊಂಡಿದ್ದರು. ನಿನ್ನೆಯಷ್ಟೇ ಶಿವರಾಮ್ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ಅಳಿಯ ಪ್ರದೀಪ್ ನಿನ್ನೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!