ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರಿಯಾಗಿ ಕರ್ತವ್ಯ ನಿರ್ವಹಿಸದ ಎಸ್ಐ ಸೇರಿದಂತೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಎಸ್ಪಿ ಲಾಕಪ್ನಲ್ಲಿ ಕೂಡಿ ಹಾಕಿ ಬೀಗ ಜಡಿದಿರುವ ಘಟನೆ ಬಿಹಾರದ ನವಾಡ ಪಟ್ಟಣದಲ್ಲಿ ಘಟನೆ ನಡೆದಿದೆ. ನಾವಡದ ಪೊಲೀಸ್ ಠಾಣೆ ಪರಿಶೀಲನೆಗೆ ಬಂದಿದ್ದ ಎಸ್ಪಿ ಗೌರವ್ ಮಂಗಳಾ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದನ್ನು ಕಂಡು ಈ ಕೆಲಸ ಮಾಡಿದ್ದಾರೆ.
ಇಬ್ಬರು ಎಸ್ಐ ಮತ್ತು ಮೂವರು ಎಎಸ್ಐಗಳನ್ನು ಮಧ್ಯರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಲಾಕಪ್ನಲ್ಲಿ ಇರಿಸಿ ನಂತರ ಬಿಡುಗಡೆ ಮಾಡಿದ್ದಾರೆ. ಈ ವಿಷಯ ಹೊರಬಿದ್ದ ನಂತರ ಎಸ್ಪಿ ಹಾಗೂ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿ ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಕೆಲಸವನ್ನು ನಾನು ಮಾಡಿಲ್ಲ ಎಂದು ಎಸ್ಪಿ ಹೇಳಿದ್ದಾರೆ. ಇದೆಲ್ಲಾ ಸುಳ್ಳು ಪ್ರಚಾರ ಎಂದು ತಳ್ಳಿ ಹಾಕಿದರು. ಮರುದಿನ ಈ ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದ ವಿಡಿಯೋ ಹೊರಬಿದ್ದಿದೆ. ಇದರಿಂದಾಗಿ ಎಸ್ಪಿ ಅವರ ವರ್ತನೆಗೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.
ಘಟನೆಯ ಕುರಿತು ತನಿಖೆ ನಡೆಸುವಂತೆ ಬಿಹಾರ ಪೊಲೀಸ್ ಅಸೋಸಿಯೇಷನ್ ಆಗ್ರಹಿಸಿದೆ. ಘಟನೆಯ ಹೊಣೆ ಹೊತ್ತಿರುವ ಎಸ್ಪಿ ಗೌರವ್ ಮಂಗಳಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಸಂಘದ ಅಧ್ಯಕ್ಷ ಮೃತ್ಯುಂಜಯ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಚರ್ಚಿಸಲು ಎಸ್ಪಿಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಸಿಸಿಟಿವಿ ಕ್ಯಾಮೆರಾ ವಿಡಿಯೋಗಳನ್ನು ಎಸ್ಪಿ ತಿರುಚಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
Nawada SP Accused Of Detaining 5 Policemen, BPA Demanded Investigation
Read more:https://t.co/K3LIGpUCa5#BiharPolice @bihar_police pic.twitter.com/65MGPNcE3k— The National Bulletin (@TheNationalBul1) September 10, 2022