ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಈ ವೇಳೆ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮದಾಯಿ ಘಾಟಿ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ.

ಘಟನೆಯಲ್ಲಿ ಸಿಎಎಫ್ನ 9ನೇ ಬೆಟಾಲಿಯನ್ಗೆ ಸೇರಿದ ಕಾನ್ಸ್ಟೆಬಲ್ ಕಮಲೇಶ್ ಸಾಹು ಎಂಬುವವರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಪೇದೆ ವಿನಯ್ ಕುಮಾರ್ ಸಾಹು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡಿರುವ ವಿನಯ್ ಅವರನ್ನು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!