ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಳಾ ಸಾಹೇಬ್ ಠಾಕ್ರೆ ಇಂದು ಇಲ್ಲಿದ್ದರೆ, ಆಪರೇಷನ್ ಸಿಂದೂರ್ಗಾಗಿ ಅವರು ಪ್ರಧಾನಿ ಮೋದಿಯವರನ್ನು ಅಪ್ಪಿಕೊಳ್ಳುತ್ತಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸೋಮವಾರ ಮಹಾರಾಷ್ಟ್ರದ ನಾಂದೇಡ್ನಲ್ಲಿ ಮಾಜಿ ಮುಖ್ಯಮಂತ್ರಿ ವಸಂತರಾವ್ ನಾಯಕ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಆಪರೇಷನ್ ಸಿಂದೂರ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ತೀವ್ರವಾಗಿ ಟೀಕಿಸಿದರು.
ಬಾಳಾ ಸಾಹೇಬ್ ಠಾಕ್ರೆ ಇಂದು ಇಲ್ಲಿದ್ದರೆ, ಆಪರೇಷನ್ ಸಿಂದೂರ್ಗಾಗಿ ಅವರು ಪ್ರಧಾನಿ ಮೋದಿಯವರನ್ನು ಅಪ್ಪಿಕೊಳ್ಳುತ್ತಿದ್ದರು. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ. ಆದರೆ ಉದ್ಧವ್ ಠಾಕ್ರೆ ಅವರ ಪಕ್ಷಕ್ಕೆ ಏನಾಗಿದೆಯೋ ನನಗೆ ತಿಳಿಯದು. ನರೇಂದ್ರ ಮೋದಿ ಅವರ ಸರ್ಕಾರ 11 ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ಮರೆತಿದೆ ಎಂದು ಶಾ ವಾಗ್ದಾಳಿ ನಡೆಸಿದರು.
ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್ ದಾಳಿಗಳಿಗೆ ಸರ್ಜಿಕಲ್ ಸ್ಟ್ರೈಕ್, ವಾಯುದಾಳಿ ಮತ್ತು ಆಪರೇಷನ್ ಸಿಂದೂರ್ ಮೂಲಕ ಭಾರತ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದ ಶಾ, ಆಪರೇಷನ್ ಸಿಂದೂರ್ನಿಂದ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಲಾಗಿದೆ. ಇದು ಜಗತ್ತಿಗೆ ಒಂದು ಸಂದೇಶ ನೀಡಿದೆ. ಅದೇನೆಂದರೆ ಭಾರತೀಯ ಸೇನೆ ಮತ್ತು ಜನರಿಗೆ ತೊಂದರೆ ನೀಡಿದವರು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು..
ಪಾಕಿಸ್ತಾನದ ವಾಯು ರಕ್ಷಣೆಯನ್ನು ಭಾರತೀಯ ಸೇನೆ ನಾಶಪಡಿಸಿದಾಗ, ಒಂದೇ ಒಂದು ಕ್ಷಿಪಣಿಯೂ ಭಾರತದ ನೆಲವನ್ನು ಮುಟ್ಟಲಿಲ್ಲ. ಯಾರಾದರೂ ದಾಳಿ ಮಾಡಿದರೆ, ಗುಂಡಿಗೆ ಶೆಲ್ನಿಂದಲೇ ಉತ್ತರ ನೀಡಲಾಗುವುದು ಎಂದು ಮೋದಿಯವರ ನಿಲುವನ್ನು ಪುನರುಚ್ಚರಿಸಿದರು.