ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 20 ಲಕ್ಷ ಮನೆ ನಿರ್ಮಾಣ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರುಒಂದು ಮನೆ ಕೂಡ ಕಟ್ಟಿಸಿಕೊಟ್ಟಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 20 ಲಕ್ಷ ಮನೆ ನಿರ್ಮಾಣ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ನಾವು ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಒಂದು ವೇಳೆ ಮಾಡದೇ ಹೋದ್ರೆ ಯೋಜನೆ ಜಾರಿ ಮಾಡದಿದ್ರೆ 1 ನಿಮಿಷ ಕೂಡ ಅಧಿಕಾರದಲ್ಲಿರಲ್ಲಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೋದಿಯವರೇ ನಿಮಗೆ ಕರ್ನಾಟಕದ ಪರಿಸ್ಥಿತಿ ಗೊತ್ತಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ 5 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ ಎಂದು ಕಿಡಿಕಾರಿದರು.ಮೋದಿಯವರೇ ನಿಮಗೆ ಕರ್ನಾಟಕದ ಪರಿಸ್ಥಿತಿ ಗೊತ್ತಿಲ್ಲ, ಬಿಜೆಪಿಯವರು ಅಧಿಕಾರಕ್ಕೆ ಬಂದರೆ ರಾಜ್ಯ, ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲ್ಲ ಎಂದು ವಾಗ್ಧಾಳಿ ನಡೆಸಿದರು. ನಾನು ಸಿಎಂ ಆಗಿದ್ದಾಗ ಎಲ್ಲಾ ಭರವಸೆ ಈಡೇರಿಸಿದ್ದೇನೆ, ಬಿಜೆಪಿಯವರು ಭರವಸೆ ಮಾತ್ರ ನೀಡಿದ್ದಾರೆ, ಯಾವುದನ್ನೂ ಕೂಡ ಈಡೇರಿಸಿಲ್ಲ ಎಂದಿದ್ದಾರೆ.