ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಚುನಾವಣೆಗೆ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಹಾಗೂ 100 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶದ ಬುಂದೇಲ್ಖಂಡ್ ಪ್ರದೇಶದ ಸಾಗರ್ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಹಾಗೂ 100 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಮಹಿಳೆಯರಿಗೆ ಮಾಸಿಕ 1500 ರೂಪಾಯಿ ನೀಡಲಾಗುತ್ತದೆ, 500 ರೂಗೆ ಸಿಲಿಂಡರ್ ಗ್ಯಾಸ್ ನೀಡುತ್ತೇವೆ ಎಂದು ಘೋಷಣೆ ಮಾಡಿದರು.
ಈ ವೇಳೆ ಪ್ರಧಾನಿ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕೇಂದ್ರ ಸರ್ಕಾರ ಏನೂ ಮಾಡಿಲ್ಲ ಎಂದರು.