ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ಈಗ 82 ವರ್ಷವಾದರೂ ದೇವರು ನನಗೆ ಶಕ್ತಿ ನೀಡಿದರೆ ಮತ್ತೊಮ್ಮೆ ವಿಧಾನಸಭೆ, ಲೋಕಸಬಾ ಚುನಾವಣೆ ನಡೆಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಗೋವಿಂದ ಕಾರಜೋಳ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ, ಆದರೆ ಮೋದಿ ಎದುರು ಮತ್ತೊಂದು ಹೆಸರು ಹೇಳುವ ಧೈರ್ಯ ಇಲ್ಲ ಎಂದರು.
ಮೋದಿ ಹಾಗೂ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಸಬ್ಸಿಡಿ ನೀಡುವುದಾಗಿ ಹೇಳಿದರು. ಸಿದ್ದರಾಮಯ್ಯ ಸರ್ಕಾರ ಕಿಸಾನ್ ಸಮಾನ್ ಯೋಜನೆಯಡಿ4ಸಾವಿರ ರೂ. ನೆರವನ್ನು ನಿಲ್ಲಿಸಿದೆ. ಹೆಚ್ಚುವರಿಯಾಗಿ, ಕಾಂಗ್ರೆಸ್ ಸರ್ಕಾರವು ಭಾಗ್ಯಲಕ್ಷ್ಮಿ ಯೋಜನೆ, ಅನುದಾನರಹಿತ ಹಾಲು ಉತ್ಪಾದನಾ ಪ್ರೋತ್ಸಾಹ ನಿಧಿ ಸೇರಿದಂತೆ ಹಲವು ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದರು.