ವರುಣಾದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಕಥೆ ಏನಾಗ್ತಿತ್ತು: ವಿಜಯೇಂದ್ರ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ಬಾರಿ ವರಣದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಸ್ಥಿತಿ ಏನಾಗೋದು ಯೋಚಿಸಿ ಎಂದು ಕಾಂಗ್ರೆಸಿಗರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ವಾಗ್ದಾಳಿ ನಡೆಸಿದ್ದಾರೆ.

ನಾನು ಮೊದಲ ಬಾರಿ ಶಾಸಕ ಆಗಿರಬಹುದು. ಆದರೆ ಕೆ.ಆರ್.ಪೇಟೆ, ಶಿರಾ ಕ್ಷೇತ್ರದಲ್ಲಿ ಗೆಲುವಿಗೆ ಶ್ರಮಿಸಿದ್ದೇನೆ. ಕಳೆದ ಬಾರಿ ವರಣದಿಂದ ಸ್ಪರ್ಧೆ ಮಾಡಿದ್ದರೆ ನಿಮ್ಮ ಸಿದ್ದರಾಮಯ್ಯ ಸ್ಥಿತಿ ಏನು ಎಂಬುದನ್ನು ಯೋಚಿಸಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಸಚಿನ್ ಪಾಂಚಾಳ ಆತ್ಮಹತ್ಯೆ ಕೇಸ್ ವಿಚಾರವಾಗಿ, ಈಶ್ವರಪ್ಪ ಪ್ರಕರಣದಲ್ಲಿ ಇದೇ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ್ದರು. ತನಿಖೆಗೆ ಎದುರಿಸಿ ಎಂದಿದ್ದರು. ಈಗ ಅವರು ಸಹ ಅದೇ ರೀತಿ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ.

ಯಾಂಕ್ ಖರ್ಗೆ ಅವರ ಎಡಗೈ ಭಂಟನಿಂದ ಸಚಿನ್ ಪಾಂಚಾಳ ಆತ್ಮಹತ್ಯೆ ಆಗಿದೆ. ಇದನ್ನು ವಿರೋಧಿಸಿ ಕಲಬುರಗಿಯಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಆಯೋಜನೆ ಮಾಡಿದ್ದೇವೆ. ಶಿಕಾರಿಪುರದಲ್ಲಿ ನಮ್ಮ ಮುಖಂಡರು ಮೃತಪಟ್ಟಿದ್ದರು ಹೀಗಾಗಿ ಭಾಗವಹಿಸಲು ಸಾಧ್ಯವಾಗಿಲ್ಲ. ನಮ್ಮ ಮುಖಂಡರು ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ನಮಗೆ ಪೊಲೀಸರಿಂದ ನ್ಯಾಯ ಸಿಗುವ ವಿಶ್ವಾಸ ಇಲ್ಲ. ಸಚಿನ್ ಸಹೋದರಿ ಅವರ ಕುಟುಂಬ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!