ಮಹೇಶ ಕುಮಟಳ್ಳಿಗೆ ಟೆಕೆಟ್ ನೀಡದಿದ್ದರೆ, ನಾನು ಸ್ಪರ್ಧಿಸುವುದಿಲ್ಲ: ರಮೇಶ ಜಾರಕಿಹೊಳಿ

ಹೊಸದಿಗಂತ ವರದಿ ವಿಜಯಪುರ:

ಚುನಾವಣೆಯ ರಂಗು ಜೋರಾಗಿದೆ. ಎಲ್ಲೆಲ್ಲೂ ಪಕ್ಷ ಪ್ರಚಾರ ಕಾರ್ಯಗಳು ಭರದಿಂದ ಸಾಗಿದೆ. ಈ ವೇಳೆ ಅಥಣಿ ಶಾಸಕ ಮಹೇಶ ಕುಮಟಳ್ಳಿಗೆ ಟೆಕೆಟ್ ನೀಡಬೇಕು. ಇಲ್ಲದಿದ್ದರೆ ನಾನು ಸಹ ಗೋಕಾಕನಿಂದ ಸ್ಪರ್ಧಿಸುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನೂ ಎರಡು ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುವೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಳುಗುವ ಹಡಗು. ಈಗ ಕಾಂಗ್ರೆಸ್ ಗೆ ಹೋಗಿ ಏನು ಮಾಡುವುದು. ಬಿಜೆಪಿ ತತ್ವ, ಸಿದ್ಧಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಬಿಜೆಪಿ ದೊಡ್ಡ ಪ್ರವಾಹ ಇದ್ದಂತೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!