August 16, 2026
Sunday, August 16, 2026
spot_img

ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ 10 ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುವೆ: ಕೇಜ್ರಿವಾಲ್ ಸವಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸವಾಲು ಹಾಕಿದ್ದಾರೆ.

ದೆಹಲಿಯಲ್ಲಿ ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ನಾನು ರಾಜಕೀಯ ತ್ಯಜಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೆಹಲಿ ತೊಂದರೆ ಅನುಭವಿಸುತ್ತಿದೆ ಇಡೀ ನಗರವು ಹಾಳಾಗಿದೆ. ಹೋಗಿ ದೆಹಲಿಯ ಜನರನ್ನು ಕೇಳಿ, ಇಂದು ನಾನು ಮೋದಿಜಿಗೆ ಸವಾಲು ಹಾಕುತ್ತೇನೆ. ನಿಮಗೆ ಧೈರ್ಯವಿದ್ದರೆ, ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ. ನೀವು ಹತ್ತು ಸ್ಥಾನಗಳಿಗಿಂತ ಹೆಚ್ಚು ಗೆದ್ದರೆ, ನಾನು ರಾಜಕೀಯವನ್ನು ತ್ಯಜಿಸುತ್ತೇನೆ. ದೆಹಲಿಯ ಜನರು ನಿಮ್ಮಿಂದ ಬೇಸತ್ತಿದ್ದಾರೆ ಎಂದು ಟೀಕಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !