ಸಿದ್ದರಾಮಯ್ಯ ಆಳಂದದಿಂದ ಸ್ಪರ್ಧಿಸಿದರೆ ಕ್ಷೇತ್ರ ತ್ಯಾಗ ಮಾಡ್ತೇನೆ : ಬಿ.ಆರ್. ಪಾಟೀಲ್

ಹೊಸದಿಗಂತ ವರದಿ ಕಲಬುರಗಿ: 

ಈದೀಗ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಇದೀಗ ಸಿದ್ದರಾಮಯ್ಯ ಅವರ ಆಪ್ತ ಮಾಜಿ ಉಪ ಸಭಾಪತಿ ಬಿ.ಆರ್ ಪಾಟೀಲ್ ಸಿದ್ದರಾಮಯ್ಯ,ರವರಿಗಾಗಿ ಕ್ಷೇತ್ರ ತ್ಯಾಗ ಮಾಡಲು ಸಿದ್ದ ಎನ್ನುವ ಮೂಲಕ ಆಳಂದ ಕ್ಷೇತ್ರಕ್ಕೆ ಅಹ್ವಾನವಿಟ್ಟಿದ್ದಾರೆ

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಳಂದ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಬರಿ ನಾಮೀನೆಷನ್ ಫೈಲ್ ಮಾಡಿ ಹೋದರೆ ಸಾಕು, ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ಅವರೇ ಸಿಎಂ ಆಗಲಿ. ಸಿದ್ದರಾಮಯ್ಯ ಆಳಂದದಿಂದ ಸ್ಪರ್ಧಿಸಿದರೆ, ನನಗೆ ಹಾಲು ಕುಡಿದಷ್ಟೇ ಸಂತೋಷವಾಗುತ್ತದೆ. ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!