ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲದೆ ಹೋದರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ ಬರಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಕೋಲಾರ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ನಗರಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲಿರಲಿ, ಸಿದ್ದರಾಮಯ್ಯನವರ ಮೇಲಿರಲಿ, ಹಾಗೇ ಅಭ್ಯರ್ಥಿ ಗೌತಮ್ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಹೇಳಿದರು.
ಮೊನ್ನೇ ಅಷ್ಟೇ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ಅವರು ಸಹ ಇದೇ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರುತ್ತದೆ ಎಂದು ಹೇಳಿದ್ದರು.