ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾರೇ ಗಲಭೆ ಮಾಡಿದರೂ ಅದು ತಪ್ಪೇ. ಆದರೆ ಅಲ್ಪಸಂಖ್ಯಾತರು ಗಲಭೆ ಮಾಡಿದರೆ ಅವರನ್ನು ಏಕೆ ಖಂಡಿಸುವುದಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸಿದ್ದರಾಮಯ್ಯನವರ ನಿರ್ಧಾರ ಇದುವರೆಗೆ ಯಾವುದೇ ಪ್ರಕರಣದಲ್ಲಿ ತೆಗೆದುಕೊಂಡಿಲ್ಲ. ಅಂಜಲಿ ಮತ್ತು ನೇಹಾ ಹಿರೇಮಠ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಯಾಕೆ ಅಂತ ಪ್ರಶ್ನಿಸಿದ್ದಾರೆ.