ನಿಷೇಧಿಸುವ ಯೋಚನೆ ಹೊಂದಿದ್ದರೇ ಯಾಕೆ 2,000 ರೂ. ನೋಟು ಪರಿಚಯಿಸಬೇಕಿತ್ತು?: ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ರಿಸರ್ವ್ ಬ್ಯಾಂಕ್ ಇಂದು 2,000 ರೂ ನೋಟನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದೆ.ಈ ಕುರಿತು ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನೋಟು ನಿಷೇಧಿಸುವ ಯೋಚನೆ ಹೊಂದಿದ್ದರೇ, ಯಾಕೆ ಎರಡು ಸಾವಿರ ರೂಪಾಯಿ ನೋಟು ಪರಿಚಯಿಸಬೇಕಿತ್ತು ಎಂಬುದಾಗಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಪ್ರಧಾನಿ ಮೋದಿಯವರು ಮತ್ತೊಂದು ನೋಟು ನಿಷೇಧಿಸಿದ್ದಾರೆ. ಬಿಜೆಪಿ ಸರ್ಕಾರಕ್ಕೆ ತಮ್ಮದೇ ಆದ ನೀತಿಗಳ ಬಗ್ಗೆ ಸ್ಪಷ್ಟತೆಯೇ ಇಲ್ಲದಿರುವುದು ಬೇಸರದ ಸಂಗತಿ ಎಂದಿದ್ದಾರೆ.

ಅವರು 2016ರಲ್ಲಿ 2000 ನೋಟುಗಳನ್ನು ನಿಷೇಧಿಸುವ ಯೋಜನೆಯನ್ನು ಹೊಂದಿದ್ದರೆ ಅದನ್ನು ಏಕೆ ಪರಿಚಯಿಸಿದರು.? ಇದು ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಬಿಜೆಪಿಯ ಹತಾಷೆಯ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!