ವರುಣ್ ಗಾಂಧಿ ಬಂದರೆ ನಮ್ಮ ಸಂತೋಷ ಇಮ್ಮಡಿ: ಕಾಂಗ್ರೆಸ್ ನಿಂದ ಬಹಿರಂಗ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆಗೆ ಬಿಜೆಪಿ ಹಲವು ಹೊಸ ಮುಖಗಳಿಗೆ ಈ ಬಾರಿ ಅವಕಾಶ ನೀಡಿದ್ದು, ಇದರಿಂದ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಈ ಪೈಕಿ ಫಿಲ್ಬಿತ್ ಕ್ಷೇತ್ರದ ಹಾಲಿ ಸಂಸದ ವರುಣ್ ಗಾಂಧಿಗೂ ಟಿಕೆಟ್ ನಿರಾಕರಿಸಲಾಗಿದೆ.

ಇದರ ಬೆನಲ್ಲೇ ವರುಣ್ ಗಾಂಧಿಗೆ ಕಾಂಗ್ರೆಸ್ ಆಫರ್ ನೀಡಿದೆ. ಕಾಂಗ್ರೆಸ್ ಪಕ್ಷ ಸೇರಿಕೊಳ್ಳುವಂತೆ ಬಹಿರಂಗ ಆಹ್ವಾನ ನೀಡಿದೆ.

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಗಾಂಧಿ ಕುಟುಂಬದ ಕುಡಿ ಅನ್ನೋ ಕಾರಣಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ವರುಣ್ ಗಾಂಧಿ ಸುಶಿಕ್ಷಿತ ನಾಯಕ. ಜೊತೆಗೆ ರಾಜಕೀಯಲ್ಲಿ ಕ್ಲೀನ್ ಇಮೇಜ್ ಇಟ್ಟುಕೊಂಡಿದ್ದಾರೆ. ಹೀಗಾಗಿ ವರುಣ್ ಗಾಂಧಿ ಕಾಂಗ್ರೆಸ್ ಸೇರಿಕೊಂಡರೆ ನಮ್ಮ ಸಂತೋಷ ಇಮ್ಮಡಿಯಾಗಲಿದೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ವರುಣ್ ಗಾಂಧಿಗೆ ಕಾಂಗ್ರೆಸ್ ಬಹಿರಂಗ ಆಹ್ವಾನ ನೀಡಿದೆ. ಇತ್ತ ಕಳೆದ ಕೆಲ ವರ್ಷಗಳಿಂದ ವರುಣ್ ಗಾಂಧಿ ಹೇಳಿಕೆಗಳ ಬಿಜಿಪಿ ಮುಜುಗರ ತಂದಿದೆ. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಭಾರಿ ಚರ್ಚೆಗಳು ನಡೆಯುತ್ತಿದೆ. ವರುಣ್ ಗಾಂಧಿ ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ, ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಅಧೀರ್ ರಂಜನ್ ಚೌಧರಿ ಬಹಿರಂಗ ಆಹ್ವಾನ ಭಾರಿ ಕುತೂಹಲ ಕೆರಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!