ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂಎಸ್ಪಿ ಜಾರಿಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ರೈತರು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದಾರೆ. ಇಲ್ಲದಿದ್ರೆ ನಾವು ಬೇರೆ ದೇಶಗಳ ಬಳಿ ಕೈ ಚಾಚೋ ಪರಿಸ್ಥಿತಿ ಬರ್ತಿತ್ತು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿಕರ ಎಲ್ಲ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸುವ ಕಾಯ್ದೆ ಜಾರಿಗೆ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆಗಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಆದರೆ ಮೋದಿ ನೇತೃತ್ವದ ಸರ್ಕಾರ ಇದನ್ನು ಪರಿಗಣಿಸುತ್ತಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಕಷ್ಟಕ್ಕೆ ಸ್ಪಂದಿಸುತ್ತದೆ ಎಂದಿದ್ದಾರೆ.