ನನ್ನನ್ನು ಗೆಲ್ಲಿಸದಿದ್ದರೆ, ನನ್ನ ನಿಮ್ಮ ಋಣಾನುಬಂಧ ಮುಗೀತು: ವಾಟಾಳ್‌ ನಾಗರಾಜ್ ಮತಯಾಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಚುನಾವಣಾ ಅಖಾಡ ರಂಗೇರುತ್ತಿದ್ದು, ಎಲ್ಲೆಡೆ ಭರದ ಪ್ರಚಾರ ನಡೆಯುತ್ತಿದ್ದು, ಚಾಮರಾಜನಗರದಲ್ಲಿ ವಾಟಾಳ್ ನಾಗರಾಜ್ ಕೂಡ ಬಿರುಸಿನ ಮತಯಾಚನೆ ಮಾಡಿದರು.

ಜನತೆ ಈ ಬಾರಿ ನನ್ನನ್ನು ಗೆಲ್ಲಿಸಬೇಕು. ನನ್ನನ್ನು ಆಯ್ಕೆ ಮಾಡಿದರೆ ಚಾಮರಾಜನಗರವನ್ನು ಭೂಪಟದಲ್ಲಿ ಅದ್ಭುತವಾಗಿ ಮೆರೆಯುವಂತೆ ಮಾಡುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ನನ್ನನ್ನು ಗೆಲ್ಲಿಸದಿದ್ದರೆ ಮೇ.13 ನೇ ತಾರೀಖು ನನ್ನ ನಿಮ್ಮ ಋಣಾನುಬಂಧ ಮುಗೀತು. ಈ ಜನ್ಮದಲ್ಲಿ ಈ ಕಡೆ ತಿರುಗಿಯೂ ನೋಡಲ್ಲ. ಚಾಮರಾಜನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಈ ಬಾರಿಯು ಕೈ ಹಿಡಿಯದಿದ್ದರೆ ಇನ್ನು ಮುಂದೆ ಚಾಮರಾಜನಗರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಅಂಗಡಿ ಮುಂಗಟ್ಟು, ಬಸ್ ನಿಲ್ದಾಣದಲ್ಲಿ ಮತ ಯಾಚಿಸಿದರು. ಈ ಬಾರಿಯ ಚುನಾವಣೆಯಲ್ಲಿ ವಾಟಾಳ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 10 ನೇ ಬಾರಿಗೆ ಕಣಕ್ಕಿಳಿಯುತ್ತಿರುವ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ 3 ಬಾರಿ ಗೆಲುವು , 6 ಬಾರಿ ಸೋಲು ಕಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!