August 12, 2026
Wednesday, August 12, 2026
spot_img

‘ತಮಿಳುನಾಡಿಗೆ ನೀರು ಬಿಟ್ಟರೆ ಸುಮ್ಮನಿರಲ್ಲ’: ಸ್ವಪಕ್ಷದ ಸರ್ಕಾರಕ್ಕೆ ಮಂಡ್ಯ ಶಾಸಕ ರವಿಕುಮಾರ್ ಎಚ್ಚರಿಕೆ

ಹೊಸದಿಗಂತ ವರದಿ ಮಂಡ್ಯ :

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದರೆ ಸ್ವತಃ ತಾನೇ ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯುವುದಾಗಿ ಮಂಡ್ಯ ಶಾಸಕ ಪಿ.ರವಿಕುಮಾರ್ ಸ್ವಪಕ್ಷದ ಸರ್ಕಾರಕ್ಕೇ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪರವಾಗಿ ನಿಲ್ಲುವುದು ತಮ್ಮ ಆದ್ಯತೆ ಎಂದು ಸ್ಪಷ್ಟಪಡಿಸುತ್ತಾ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಕೊಡಬಾರದು. ದಿನಕ್ಕೆ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಯಾವ ರೀತಿ ಆದೇಶ ನೀಡಲಾಗಿದೆಯೋ ಗೊತ್ತಿಲ್ಲ. ಪ್ರಸ್ತುತ ಕಬಿನಿ ಜಲಾಶಯ ಭರ್ತಿಯಾಗಿರುವುದರಿಂದ ನೀರು ಹೊರಹೋಗುತ್ತಿದೆಯೇ ಹೊರತು ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಒಂದು ವೇಳೆ ನೀರು ಬಿಟ್ಟರೆ ಸರ್ಕಾರದ ವಿರುದ್ಧ ನಾನೇ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !