ದೇವೇಗೌಡರ ಮೇಲೆ ಗೌರವ ಇದ್ದರೆ ಕೂಡಲೇ ಬಂದು ತನಿಖೆ ಎದುರಿಸು: ಪ್ರಜ್ವಲ್‌ ಗೆ ಕುಮಾರಸ್ವಾಮಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೂಡಲೇ ಬಂದು ತನಿಖೆ ಎದುರಿಸು ಎಂದು ಮಾಜಿ ಸಿಎಂ ಹೆಚ್‌ಡಿಕೆ ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣಗೆ ಮನವಿ ಮಾಡಿದರು.

ಬೆಂಗಳೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾಕೆ ಹೆದರಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ಕಾರ್ಯಕರ್ತರ ಮೇಲೆ ಪಕ್ಷ ಬೆಳೆದಿದೆ. ಅವರ ಆಶೀರ್ವಾದದಿಂದ ಬೆಳೆದಿದ್ದೇವೆ. ಹೀಗಾಗಿ ವಾಪಸ್ ಬಂದು ತನಿಖೆಗೆ ಸಹಕಾರ ಕೊಡುವಂತೆ ಪ್ರಜ್ವಲ್ ಗೆ ಕೈ‌ಮುಗಿದು ಕೇಳುತ್ತೇನೆ ಎಂದರು.

ಎಲ್ಲೇ ಇದ್ದರೂ ಬಂದು ತನಿಖೆ ಎದುರಿಸು. ಮುಂದಿನ 24, 48 ಗಂಟೆ ಒಳಗೋ ಬಂದು ತನಿಖೆ ಎದುರಿಸು. ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ. ದೇವೇಗೌಡರಿಗೆ ಮನವಿ ಮಾಡಿ ಅಂತ ಹೇಳಿದ್ದೆ. ಆದರೆ ಈಗ ನಾನೇ ಮನವಿ ಮಾಡ್ತೀನಿ. ಎಲ್ಲೇ ಇದ್ದರೂ ಬಂದು ತನಿಖೆ ಎದುರಿಸು ಎಂದು ಕುಮಾರಸ್ವಾಮಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!