‘ರೈತರ ಮಕ್ಕಳನ್ನು ಮದುವೆಯಾದ್ರೆ 2 ಲಕ್ಷ ರೂ. ನೀಡುವ ಯೋಜನೆ ಜಾರಿಗೆ’: ಎಚ್ ಡಿಕೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಯ ರೈತರ ಮಕ್ಕಳನ್ನು ಮದುವೆಯಾದ್ರೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದ ಬಿದರೆಗುಡಿ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ಹಾಗೂ ಬೃಹತ್ ರೋಡ್ ಶೋ ನಡೆಸಲಾಯಿತು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದರು.

ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಯ ರೈತರ ಮಕ್ಕಳನ್ನು ಮದುವೆಯಾದ್ರೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.ಈಗಾಗಲೇ ವಿವಿಧ ಭರವಸೆ ನೀಡಿದ ಕುಮಾರಸ್ವಾಮಿ ಯುವಕರನ್ನು ಸೆಳೆಯಲು ಇದೀಗ ಈ ಯೋಜನೆ ಘೋಷಿಸಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!