ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಯ ರೈತರ ಮಕ್ಕಳನ್ನು ಮದುವೆಯಾದ್ರೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದ ಬಿದರೆಗುಡಿ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ಹಾಗೂ ಬೃಹತ್ ರೋಡ್ ಶೋ ನಡೆಸಲಾಯಿತು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದರು.
ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಯ ರೈತರ ಮಕ್ಕಳನ್ನು ಮದುವೆಯಾದ್ರೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.ಈಗಾಗಲೇ ವಿವಿಧ ಭರವಸೆ ನೀಡಿದ ಕುಮಾರಸ್ವಾಮಿ ಯುವಕರನ್ನು ಸೆಳೆಯಲು ಇದೀಗ ಈ ಯೋಜನೆ ಘೋಷಿಸಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ ನೀಡುವ ಯೋಜನೆ ಜಾರಿಗೆ ತರುತ್ತೇವೆ ಎಂದಿದ್ದಾರೆ.