ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಸುದೀಪ್ (Sudeep) ಬಿಜೆಪಿ (BJP) ಪರ ಚುನಾವಣಾ ಪ್ರಚಾರ (Election Campaign) ಇಂದಿನಿಂದ ಆರಂಭಿಸಿದ್ದಾರೆ.
ಇಂದು (ಏಪ್ರಿಲ್ 19) ಶಿಗ್ಗಾಂವಿಯಿಂದ (Shiggaon) ನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಟ್ಟಿಗೆ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ಪರ ಪ್ರಚಾರ ಪ್ರಾರಂಭ ಮಾಡಿರುವ ಕುರಿತಾಗಿ ಟ್ವೀಟ್ ಮಾಡಿರುವ ಸುದೀಪ್, ಶಿಗ್ಗಾಂವಿಯಿಂದ ಪ್ರಚಾರ ಶುರು ಮಾಡಿರುವುದು ಹೆಮ್ಮೆಯ ವಿಚಾರ ಎಂದಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಜೊತೆಗಿನ ಸೆಲ್ಫಿ ಸಹ ಹಂಚಿಕೊಂಡಿದ್ದಾರೆ.
”ನಮಸ್ಕಾರ, ಶ್ರೀ ಕನಕದಾಸರು ಮತ್ತು ಶ್ರೀ ಸಂತ ಶಿಶುನಾಳರು ಹುಟ್ಟಿದ ಶಿಗ್ಗಾವಿ ತಾಲೂಕಿನಿಂದಲೆ ಪ್ರಚಾರ ಶುರು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ ಮತ್ತು ಸಂತೋಷದ ಸಂಗತಿ. ಎಲ್ಲರಿಗೂ ಶುಭವಾಗಲಿ” ಎಂದು ಟ್ವೀಟ್ ಮಾಡಿರುವ ಸುದೀಪ್ ಟ್ವೀಟ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗಿನ ಸೆಲ್ಫಿ ಹಂಚಿಕೊಂಡಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಟ್ಟಿಗಿನ ಚಿತ್ರವನ್ನೂ ಹಂಚಿಕೊಂಡಿದ್ದಾರೆ.
🙏🏼
ನಮಸ್ಕಾರ
ಶ್ರೀ ಕನಕದಾಸರು ಮತ್ತು ಶ್ರೀ ಸಂತ ಶಿಶುನಾಳರು ಹುಟ್ಟಿದ ಶಿಗ್ಗಾವಿ ತಾಲೂಕಿನಿಂದಲೆ ಪ್ರಚಾರ ಶುರು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ ಮತ್ತು ಸಂತೋಷದ ಸಂಗತಿ.
ಎಲ್ಲರಿಗೂ ಶುಭವಾಗಲಿ… pic.twitter.com/u5Ed0UlZNK— Kichcha Sudeepa (@KicchaSudeep) April 19, 2023
ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ ಹಾಗೂ ಸುದೀಪ್ ಶಿಗ್ಗಾಂವಿಯಲ್ಲಿ ರಾಣಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರ್ಯಾಲಿಗೆ ಚಾಲನೆ ನೀಡಿದರು. ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸುದೀಪ್, ಶಿಗ್ಗಾಂವಿಯಲ್ಲಿ ಪ್ರಚಾರ ಆರಂಭಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ನಾನು ಭಾರತೀಯನಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇ ಬೇಕು ಒಳ್ಳೆಯತನ ಎಂದು ಕಿಚ್ಚ ಸುದೀಪ್ ಹೇಳಿದರು.
ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಅವರಿಗೆ ಇಷ್ಟು ಜನ ಸೇರಿರುವುದು ನೋಡಿದರೆ ಗೊತ್ತಾಗುತ್ತದೆ ಅವರು ಎಂಥಹಾ ವ್ಯಕ್ತಿ, ಜನರಿಗಾಗಿ ಎಷ್ಟು ಕೆಲಸ ಮಾಡಿದ್ದಾರೆ ಎಂಬುದು. ಅವರಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಅವರು ಕೆಲಸ ಮಾಡಲು ಅವಕಾಶ ಬೇಕು. ಈಗ ಅವರೊಬ್ಬರೆ ಇಲ್ಲ ಅವರ ಪರವಾಗಿ ನಾನೂ ಬಂದಿದ್ದೇನೆ. ಕೆಲಸ ಆಗಬೇಕು, ಜನರಿಗೆ ಒಳ್ಳೆಯದಾಗಬೇಕು. ಭಾರತೀಯನಾಗಿ ಮೋದಿ ಅವರ ಕಾರ್ಯಗಳನ್ನು ನಾನು ಮೆಚ್ಚುತ್ತೇನೆ. ವಿದೇಶಗಳಲ್ಲಿ ಹೋದರೆ ಭಾರತದ ಹೆಮ್ಮೆಯಾಗಿ ಮಾತನಾಡ್ತಾರೆ. ನಾನೂ ಸಹ ಸುಮ್ಮ-ಸುಮ್ಮನೆ ಪ್ರಚಾರಕ್ಕೆ ಬರುವವನಲ್ಲ. ಕೆಲಸಗಳಾಗುತ್ತವೆ ಎಂಬ ನಂಬಿಕೆ ಇದ್ದರೆ ಮಾತ್ರ ಬರ್ತೇನೆ ಎಂದರು.